Translate in your Language

Saturday, May 17, 2014

ಡಾ.ಅನುಪಮಾ ನಿರಂಜನ ಅವರ ಹುಟ್ಟು ಹಬ್ಬದ ನೆನಪಿನಲ್ಲಿ

Dr. Anupama Niranjan
ಕನ್ನಡ ನಾಡಿನಲ್ಲಿ ಪ್ರಸಿದ್ಧ ಬರಹಗಾರ್ತಿಯಾಗಿ, ವೈದ್ಯರಾಗಿ ಜನಾನುರಾಗಿಗಳಾಗಿ ಅಪಾರವಾದ ಪ್ರಸಿದ್ಧಿ ಪಡೆದು ಅನುಪಮ ಬಾಳ್ವೆ ನಡೆಸಿದ ಡಾ. ಅನುಪಮಾ ನಿರಂಜನ ಅವರು  1934ರ ಮೇ 17ರಂದು ತೀರ್ಥಹಳ್ಳಿಯಲ್ಲಿ  ಜನಿಸಿದರು.  ಆನುಪಮಾ ಅವರ ಮೊದಲಿನ ಹೆಸರು ವೆಂಕಟಲಕ್ಷ್ಮಿ. 

ವೃತ್ತಿಯಲ್ಲಿ ವೈದ್ಯರಾದ ಅನುಪಮಾ ಅವರು,
 ಕನ್ನಡ ಕಾದಂಬರಿ ಕ್ಷೇತ್ರವು ತನ್ನ ಆಳ ಅಗಲಗಳನ್ನು ವಿಸ್ತರಿಸಿಕೊಂಡು ಮುನ್ನಡೆಯುತ್ತಿರುವ ಸಂಧರ್ಭದಲ್ಲಿ ಆ ಕ್ಷೇತ್ರಕ್ಕೆ ಕಾಲಿಟ್ಟರು. ಒಬ್ಬ ಒಳ್ಳೆಯ ವೈದ್ಯರಾಗುವುದರ ಜೊತೆಗೆ ಗಟ್ಟಿ ಸಾಹಿತಿಯಾಗಿ ಬೆಳೆದುನಿಂತರು. ಕುಳಕುಂದ ಶಿವರಾಯರೆಂದೇ ಚಿರಪರಿಚಿತರಾಗಿದ್ದ ನಿರಂಜನ ಅವರೊಂದಿಗೆ ನಡೆದ ವಿವಾಹ,  ಅವರಿಗೆ ಲೇಖಕಿಯಾಗಿ ತಮ್ಮ  ಗುರಿಯನ್ನು ಸಾದಿಸುವಲ್ಲಿ ಮತ್ತಷ್ಟು ಸಹಕಾರಿಯಾಯಿತು.  ಡಾ.ಅನುಪಮಾ ನಿರಂಜನ ಅವರು ಬುದ್ದಿವಿಕಾಸಕ್ಕೆ ಪ್ರೇರಕವಾಗಬಲ್ಲ ವಿಚಾರ ಸಾಹಿತ್ಯದ ಜೊತೆಗೆ ವೈದ್ಯಕೀಯ ಗ್ರಂಥಗಳನ್ನು ಸಹ ರಚಿಸಿದರು.