Translate in your Language

Saturday, August 23, 2014

ಕನ್ನಡಕ್ಕೆ ೬ನೇ ಜ್ನಾನಪೀಠ ಪ್ರಶಸ್ತಿ ತಂದುಕೊಟ್ಟ ಶ್ರೇಷ್ಠ ಸಾಹಿತಿ ಡಾ. ಯು.ಆರ್ ಅನಂತಮೂರ್ತಿ ಇನ್ನಿಲ್ಲ !

ಸಾಹಿತ್ಯದ ಹಲವು ಪ್ರಾಕಾರಗಳಲ್ಲಿ ತಮ್ಮ ಶ್ರೇಷ್ಠ ತೆಯನ್ನು ಮೆರೆದಿದ್ದಲ್ಲದೇ  ನೇರ-ನಿಷ್ಟುರ ವಿವಾದಾತ್ಮಕ ಹೇಳಿಕೆಗಳಿಂದಲೂ ನಾಡಿನ ಏಳಿಗೆಗಾಗಿ ಶ್ರಮಿಸಿದ 
ಕನ್ನಡಕ್ಕೆ ೬ನೇ ಜ್ನಾನಪೀಠ ಪ್ರಶಸ್ತಿ ತಂದುಕೊಟ್ಟ ಶ್ರೇಷ್ಠ ಸಾಹಿತಿ ಡಾ. ಯು.ಆರ್ ಅನಂತಮೂರ್ತಿ ನಮ್ಮನ್ನು ಅಗಲಿದ್ದಾರೆ  ನಮ್ಮ ಕನ್ನಡ ಸಾಹಿತ್ಯ ಪ್ರೇಮಿಗಳಿಗೆ ಅಪಾರ ನಷ್ಠ ವಾಗಿದೆ. ಅವರ ಆತ್ಮಕ್ಕೆ  ಶಾಂತಿ ದೊರಕಲೆಂದು ಆ ದೇವರಲ್ಲಿ ಪ್ರಾರ್ಥಿಸೋಣ 


ಯು.ಆರ್.ಅನಂತಮೂರ್ತಿ ಅವರ ಜೀವನ ಚರಿತ್ರೆ


Wednesday, August 20, 2014

ಎಂ. ಪಿ. ಶಂಕರ್ ಅವರ ಹುಟ್ಟು ಹಬ್ಬದ ಸವಿ ನೆನಪಿನಲ್ಲಿ

ಜನನ: 20 ಆಗಸ್ಟ್,  1935 ನಿಧನ: 17 ಜುಲೈ 2008
ಅಗಾಧ ಮೈಕಟ್ಟಿನ ಅಜಾನುಬಾಹು ಎಂ. ಪಿ. ಶಂಕರ್ ಕನ್ನಡ ಚಿತ್ರರಂಗದ ಚಿರಸ್ಮರಣೀಯ ಕಲಾವಿದರಲ್ಲಿ ಒಬ್ಬರು. ‘ನಾರದ ವಿಜಯ’ ಎಂಬ ಚಿತ್ರದಲ್ಲಿ ‘ಮಾಂಸಪರ್ವತ’ (ಗುರ್ರ್ ಪಾದ)ಎಂದು ನಾರದ ಪಾತ್ರಧಾರಿಯಾದ ಅನಂತ್ ನಾಗ್ ಅವರಿಂದ ಕರೆಯಲ್ಪಟ್ಟ ಈ ಚಿತ್ರರಂಗದ ಅವಿಸ್ಮರಣೀಯ ಪಾತ್ರಧಾರಿ, ಪ್ರತಿಭೆ ಮತ್ತು ಸಾಧನೆಗಳ ಪರ್ವತವೂ ಹೌದು. ಈ ಮೈಸೂರು ಪುಟ್ಟಲಿಂಗಪ್ಪ ಶಂಕರ್ ಅವರು ಜನಿಸಿದ್ದು ಆಗಸ್ಟ್ 20, 1935ರಲ್ಲಿ. 

ಕುಸ್ತಿ ಪೈಲ್ವಾನರಂತಿದ್ದ ಎಂ. ಪಿ. ಶಂಕರ್ ಅವರು ನಿಜಕ್ಕೂ ಪೈಲ್ವಾನರಾಗಿ ಸಾಧನೆ ಮೆರೆದು ಮೈಸೂರು ದಸರಾ ಸ್ಪರ್ಧೆಗಳಲ್ಲಿ ಹಲವಾರು ಸ್ಪರ್ಧೆಗಳನ್ನು ಗೆದ್ದಿದ್ದವರು. ‘ರತ್ನಮಂಜರಿ’ ಚಿತ್ರದಿಂದ ಪ್ರಾರಂಭಗೊಂಡ ಎಂ. ಪಿ. ಶಂಕರ್ ಅವರ ಚಿತ್ರ ಜೀವನದಲ್ಲಿ ಅವರು ಹೆಚ್ಚು ನಿರ್ವಹಿಸಿದ್ದು ಖಳನಾಯಕ ಪಾತ್ರಗಳನ್ನೇ. ಎಂ. ಪಿ. ಶಂಕರ್ ಅವರ ಪ್ರತಿಭಾ ಸಾಮರ್ಥ್ಯವನ್ನೂ, ಅವರಿಗೆ ಕುಸ್ತಿಯಲ್ಲಿ ಇದ್ದ ಹುರುಪುಗಳನ್ನು ಅರಿತಿದ್ದ ಪುಟ್ಟಣ್ಣ ಕಣಗಾಲರು ಅವರಿಗೆ ತಮ್ಮ ಪ್ರಸಿದ್ಧ ಚಿತ್ರಗಳಲ್ಲಿ ಒಂದಾದ ‘ನಾಗರಹಾವು’ದಲ್ಲಿ ಕುಸ್ತಿ ಗರಡಿಯ ಮುಖ್ಯಸ್ಥರ ಪಾತ್ರವನ್ನು ಕೊಟ್ಟಿದ್ದರು. “ನಾಷ್ಟಾ ಮಾಡಿರುವ ಮುಖ ನೋಡು ಅಂತ ವಿಷ್ಣುವರ್ಧನ್ ಅವರಿಗೆ ಒಂದು ರಾಶಿ ದೋಸೆ ಮತ್ತು ಅದರ ಮೇಲೆ ದೊಡ್ಡ ಬೆಣ್ಣೆಯ ಗುಡ್ಡೆಯನ್ನು ಇಟ್ಟು ಚೆನ್ನಾಗಿ ತಿನ್ನು, ಕುಸ್ತಿ ಮಾಡೋನು ಚೆನ್ನಾಗಿ ತಿನ್ಬೇಕು” ಎಂದು ನುಡಿದ ಚಿತ್ರದುರ್ಗದ ನಾಯಕನೇ ತಾನಾಗಿ ಮೂರ್ತಿವೆತ್ತ ಆ ಪಾತ್ರವನ್ನು ಜನ ಹೇಗೆ ತಾನೇ ಮರೆತಾರು.

ಎಸ್.ಎಲ್. ಭೈರಪ್ಪ ಅವರ 84ನೇ ಹುಟ್ಟು ಹಬ್ಬದ ಶುಭಾಶಯಗಳು

ಜನನ: 20ನೇ ಆಗಸ್ಟ್,1931, ಜನನ ಸ್ಥಳ: ಸಂತೇಶಿವರ, ಹಾಸನ ಜಿಲ್ಲೆ, ಕರ್ನಾಟಕ, ಭಾರತ
ಸಾಹಿತ್ಯದ ವಿಧ(ಗಳು): ಕಥೆ, ಕಾದಂಬರಿ, ಇತಿಹಾಸ
ಪ್ರಭಾವಗಳು: ಗೊರೂರು ರಾಮಸ್ವಾಮಿ ಅಯ್ಯಂಗಾರ್, ಆದಿ ಶಂಕರಾಚಾರ್ಯ, ಮಹಾತ್ಮ ಗಾಂಧಿ, ಆನಂದ ಕೆ.ಕುಮಾರಸ್ವಾಮಿ, ರಾಮಕೃಷ್ಣ ಪರಮಹಂಸ , ಸ್ವಾಮಿ ವಿವೇಕಾನಂದ

"ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ" ಆಧುನಿಕ ಕನ್ನಡ ಸಾಹಿತ್ಯದಲ್ಲಿ ಇವರ ಕಾದಂಬರಿ ಪ್ರಕಾರ ಹುಲುಸಾಗಿ ಬೆಳೆದು ಅತಿ ಹೆಚ್ಚು ಓದುಗರನ್ನು ತಲುಪಿದೆ. ಒಟ್ಟಾರೆ ಇಪ್ಪತ್ತನೆಯ ಶತಮಾನ "ಕಾದಂಬರಿ ಯುಗ" ಅನ್ನಿಸಲು ಇವರ ಕೊಡುಗೆಯು ಅಪಾರವಾಗಿದೆ. ಈ ಪರಂಪರೆಯಲ್ಲಿ ಜನ ಮನ ಮುಟ್ಟಿದ ಸಾಹಿತಿಗಳು ಬರೆದೇ ಬದುಕನ್ನು ರೂಪಿಸಿ ಕೊಂಡವರಿದ್ದಾರೆ. ಇದಲ್ಲದೆ ಬದುಕಿಗೊಂದು ವೃತ್ತಿಯಿದ್ದು ವಿವಿಧ ಓದುಗರ ನಡುವೆ ಕನ್ನಡ ಸಾಹಿತ್ಯಕ್ಕೆ ಭಾಷೆ, ವಸ್ತು, ವಿನ್ಯಾಸದ ಹೊಸತು ಕೊಟ್ಟವರೂ ಇದ್ದಾರೆ. ಬರವಣಿಗೆ ಪ್ರವೃತ್ತಿಯಾಗಿಸಿಕೊಂಡು, ಅಕಾಡೆಮಿಕ್ ಆಗಿದ್ದೂ, ಹೆಚ್ಚು ಓದುಗರನ್ನು ತಲುಪಿದ ಜನಪ್ರಿಯ ಕಾದಂಬರಿಕಾರರೆಂದರೆ ಡಾ| ಎಸ್.ಎಲ್. ಭೈರಪ್ಪ ಅವರು. ತಾವು ಆಯ್ಕೆ ಮಾಡಿಕೊಂಡ ವಸ್ತು, ಅದನ್ನು ನಡೆಸುವ ರೀತಿ, ಅದಕ್ಕೊಂದು ಅಂತ್ಯ ಕೊಡುವ ಲೇಖಕನ ಮನೋಸ್ಥಿತಿ ಬಗ್ಗೆ ಚರ್ಚೆಗಳಲ್ಲಿ ಭಿನ್ನ ಅಭಿಪ್ರಾಯಗಳೂ ಇವೆ. ಇಂಥ ಸಂದರ್ಭದಲ್ಲೂ ಭೈರಪ್ಪನವರ ಕಾದಂಬರಿಗಳು ಬಹು ಓದುಗರ ಚರ್ಚೆಯಲ್ಲಿರುತ್ತವೆ. ಮಾಧ್ಯಮಗಳಲ್ಲಿ ವಿಮರ್ಶೆ ಮೂಲಕ ಭಿನ್ನಾಭಿಪ್ರಾಯಗಳು ಆಗಾಗ್ಗೆ ತಲೆದೋರಿದರೂ, ಅದು ಒಂದು ವಲಯದ ಚರ್ಚೆಯೆಂದು ಅಭಿಪ್ರಾಯಪಡುವವರೂ ಇದ್ದಾರೆ

Tuesday, August 19, 2014

ದ್ವಾರಕೀಶ್ ಅವರಿಗೆ 73ನೇ ಹುಟ್ಟು ಹಬ್ಬದ ಶುಭಾಶಯಗಳು



19 August 1942ರಲ್ಲಿ ಜನಿಸಿದ 

ಕರ್ನಾಟಕದ ಕುಳ್ಳ, ಹೆಸರಾಂತ ಹಾಸ್ಯ ನಟ, ನಿರ್ಮಾಪಕ, 
ನಿರ್ದೇಶಕ





ದ್ವಾರಕೀಶ್ ಅವರಿಗೆ



73ನೇ ಹುಟ್ಟು ಹಬ್ಬದ ಶುಭಾಶಯಗಳು




Friday, August 15, 2014

ಜ್ಞಾನಪೀಠ ಪ್ರಶಸ್ತಿ


ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨ ೧೯೬೧ ರಲ್ಲಿ ಸ್ಥಾಪಿಸಿದರು. ಈ ಪ್ರಶಸ್ತಿಯನ್ನು ಪ್ರಪ್ರಥಮವಾಗಿ ೧೯೬೫ರಲ್ಲಿ ಮಲೆಯಾಳಂ ಲೇಖಕ ಜಿ. ಶಂಕರ ಕುರುಪರಿಗೆ ಪ್ರದಾನ ಮಾಡಲಾಯಿತು. ವಿಜೇತರಿಗೆ ಪ್ರಶಸ್ತಿ ಫಲಕ, ೧೧ ಲಕ್ಷ ರುಪಾಯಿ ಚೆಕ್ ಹಾಗು ವಾಗ್ದೇವಿಯ ಕಂಚಿನ ವಿಗ್ರಹವನ್ನು ನೀಡಿ ಗೌರವಿಸಲಾಗುವುದು.

ಜ್ಞಾನಪೀಠದ ಹಿನ್ನೆಲೆ

ಅರ್ಜುನ್-ಸರ್ಜಾ ಅವರಿಗೆ 51ನೇ ಹುಟ್ಟುಹಬ್ಬದ ಶುಭಾಶಯಗಳು

ನಮ್ಮ ನೆಚ್ಚಿನ ಕರಾಟೆ ಕಿಂಗ್-ಸಿಂಹದ ಮರಿ-ಪುಟಾಣಿ ಏಜೆಂಟ್
ಅರ್ಜುನ್-ಸರ್ಜಾ 
ಅವರಿಗೆ ೫೧ನೇ ಹುಟ್ಟುಹಬ್ಬದ ಶುಭಾಶಯಗಳು

ಅವರ ಬೃಹತ್ ಗಾತ್ರದ ಶ್ರೀ ಆಂಜನೇಯ ವಿಗ್ರಹದ ಎಲ್ಲಾ ಕೆಲಸಗಳು ಅಡ್ಭುತವಾಗಿ ನೆರವೇರಲಿ. ಬಜರಂಗಬಲಿ ಅವರಿಗೆ ಎಲ್ಲಾ ಯಶಸ್ಸು ಕರುಣಿಸಲಿ ನೂರು ಕಾಲ ಸಂತೋಷದಿಂದ ಬಾಳಲಿ, ಹಾಗು  ಕನ್ನಡದಲ್ಲಿ ಅವರ ಚೊಚ್ಚಲ ನಿರ್ದೇಶನದ ಚಿತ್ರ ಅಭಿಮನ್ಯು ಅದ್ಭುತ ಯಶಸ್ಸು ಗಳಿಸಲಿ ಎಂದು ಈ ಸಮಯದಲ್ಲಿ ಹಾರೈಸೋಣ


ವೀರಯೋಧ ಸಂದೀಪ್ ಉನ್ನಿಕೃಷ್ಣನ್ ಅಮರವಾಗಲಿ

We Salute Sandeep Unnikrishnan
2008ರ ನವೆಂಬರ್ 26ರಂದು ಮುಂಬೈ ಮೇಲೆ ಭಯೋತ್ಪಾದಕ ದಾಳಿ ನಡೆದ ಕರಾಳ ನೆನಪಿಗೆ ಇಂದಿಗೆ ಐದು ವರ್ಷ ಪೂರ್ಣಗೊಂಡಿದೆ.. ಜೊತೆಗೆ ಬೆಂಗಳೂರು ಮೂಲದ ಭಾರತದ ಹೆಮ್ಮೆಯ ಪುತ್ರ ವೀರಯೋಧ ಸಂದೀಪ್ ಉನ್ನಿಕೃಷ್ಣನ್ ಹುತಾತ್ಮರಾದ ದಿನವೂ ಹೌದು.

Saturday, August 9, 2014

ವಿ. ಕೃ. ಗೋಕಾಕ್ ಅವರ ಹುಟ್ಟು ಹಬ್ಬದ ಸವಿ ನೆನಪಿನಲ್ಲಿ

ಆಗಸ್ಟ್ 9, 1909 ವಿನಾಯಕ ಕೃಷ್ಣ ಗೋಕಾಕರು ಜನಿಸಿದ ದಿನ. ಡಾ. ವಿನಾಯಕ ಕೃಷ್ಣ ಗೊಕಾಕರೆಂದರೆ ನಮ್ಮ ಕಣ್ಣಮುಂದೆ ನಿಲ್ಲುವ ಚಿತ್ರ ಅಂತರಾಷ್ಟ್ರೀಯ ಖ್ಯಾತಿಯ ಎತ್ತರದ ವ್ಯಕ್ತಿ. ಕನ್ನಡಕದ ಹಿಂದಿನ ಆಳವಾದ ಒಳನೋಟದ ಕಣ್ಣು, ಗಂಭೀರ ಧ್ವನಿ, ಗಂಭೀರ ನಿಲುವು. ಈ ಪರಿಪಕ್ವ ವ್ಯಕ್ತಿತ್ವದ ಹಿಂದೆ ಶೈಕ್ಷಣಿಕ ಕ್ಷೇತ್ರದಲ್ಲಿ ಆಡಳಿತ ನಿರ್ವಹಿಸಿದ ಕುಲಪತಿಯ ವರ್ಚಸ್ಸಿದೆ. ಶಿಕ್ಷಣವೇತ್ತರ ವೈಚಾರಿಕ ಪ್ರಗಲ್ಪತೆ ಇದೆ, ಪ್ರಾಧ್ಯಾಪಕನ ಪ್ರತಿಭೆ ಇದೆ, ಅನುಭವ ತಪಸ್ಸಿದೆ, ಅನುಭಾವ ಸಿದ್ಧಿಯಿದೆ, ಪ್ರಪಂಚ ಪಯಣಿಗನ ವಿಶಾಲ ಜ್ಞಾನವಿದೆ, ಬೌದ್ಧಿಕ ಔನ್ನತ್ಯವಿದೆ, ಸೃಜನ ಕವಿಯ ಅಂತಃಸ್ಫುರಣವಿದೆ, ಯೋಗಿಯ ನಿಷ್ಕಾಮ ಬುದ್ಧಿಯಿದೆ. 


ಧಾರವಾಡದಲ್ಲಿ ಪ್ರಪ್ರಥಮ ಶ್ರೇಣಿಯಲ್ಲಿ ಸ್ನಾತಕೋತ್ತರ ಪದವಿ ಪಡೆದ ಗೋಕಾಕರು ಮುಂದೆ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆಯಲು ಪರೀಕ್ಷೆಗೆ ಕುಳಿತರು. ಅವರಿಗೆ ಅಲ್ಲಿ ಯಶಸ್ಸು ಪಡೆಯುವ ಸಂಪೂರ್ಣ ಭರವಸೆ ಇತ್ತು. ಇನ್ನೂ ಮೌಖಿಕ ಪರೀಕ್ಷೆ ಆಗುವುದರಲ್ಲಿತ್ತು. ತತ್ಪೂರ್ವದಲ್ಲಿ ಕಾಂಟಿನೆಂಟಲ್ ಪ್ರವಾಸಕ್ಕೆಂದು ಹೊರಟರೆ ದಾರಿಯಲ್ಲಿ ಎಡಿನ್ ಬರೋದಲ್ಲಿ ತೀವ್ರತರವಾದ ಕರುಳು ಬೇನೆಯಿಂದ ಬಳಲುತ್ತಾ ಚಿಕಿತ್ಸೆಗೆ ಒಳಗಾಗಬೇಕಾಯಿತು. ವೈವಾ ತಪ್ಪಿ ಹೋಗಿ ಆಕ್ಸ್ ಫರ್ಡ್ ಪ್ರಥಮ ದರ್ಜೆಯ ಉತ್ತೀರ್ಣತೆಯ ಆಸೆ ಹುಸಿಯಾಯಿತು ಎಂದುಕೊಂಡರು. ಗೋಕಾಕರ ಲಿಖಿತ ಪರೀಕ್ಷೆಯ ಉಜ್ವಲತೆ ಎಷ್ಟು ಶ್ರೇಷ್ಠವಾಗಿತ್ತೆಂದರೆ ವೈವಾ ಪರೀಕ್ಷೆ ಇಲ್ಲದೆಯೇ ಆಕ್ಸ್ ಫರ್ಡ್ ಪರಿಣತರು ಗೋಕಾಕರನ್ನು ಶ್ರೇಷ್ಠ ದರ್ಜೆಯ ಉತ್ತೀರ್ಣತೆಗೆ ಪರಿಗಣಿಸಿದರು.

Wednesday, August 6, 2014

ಜಿ ಪಿ ರಾಜರತ್ನಂ ಅವರ ಹುಟ್ಟು ಹಬ್ಬದ ಸವಿ ನೆನಪಿನಲ್ಲಿ

G P Rajaratnam
'ಜಿ. ಪಿ. ರಾಜರತ್ನಂ'ರವರು ಹಲವು ಪ್ರಕಾರಗಳಲ್ಲಿ ಸುಮಾರು ೨೯೫ ಗ್ರಂಥಗಳನ್ನು ರಚಿಸಿರುವ ರಾಜರತ್ನಂರವರ ಸಾದನೆ ಅದ್ವಿತೀಯವಾದುದು

'ಜಿ. ಪಿ. ರಾಜರತ್ನಂ'(೧೯೦೪-೧೯೭೯) ರವರು ಮೂಲತಹ ಚಾಮರಾಜ ನಗರ ಜಿಲ್ಲೆಯ ಗುಂಡ್ಲು ಪೇಟೆಯವರು.ಇವರ ಪೂರ್ವಜರು ತಮಿಳುನಾಡಿನ ನಾಗ ಪಟ್ಟಣಕ್ಕೆ ಸೇರಿದ ತಿರುಕ್ಕಣ್ಣಾ ಪುರ ಎಂಬ ಅಗ್ರಹಾರದಿಂದ ೧೯೦೬ ರಲ್ಲಿ ಮೈಸೂರಿಗೆ ಬಂದರು. ಹೆಸರಾಂತ ಗುಂಡ್ಲು ಪಂಡಿತ ವಂಶ ದಲ್ಲಿ ಡಿಸೆಂಬರ್ 5, 1904 ರಂದು ರಾಮನಗರದಲ್ಲಿ ಜನಿಸಿದರು.ಮೊದಲಿಗೆ ಇವರ ಹೆಸರು ಜಿ.ಪಿ.ರಾಜಯ್ಯಂಗಾರ್ ಎಂದಿತ್ತು.ಇವರು ಲೋಯರ್ ಸೆಕೆಂಡರಿ ಓದುತ್ತಿದ್ದಾಗ ಚೇಷ್ಟೆಗಾಗಿ ಶಾಲೆಯ ಗುಮಾಸ್ತರನ್ನು ಪುಸಲಾಯಿಸಿ ತಮ್ಮ ಹೆಸರನ್ನು ಗಿ.ಪಿ.ರಾಜರತ್ನಂ ಎಂದು ತಿದ್ದಿಕೊಂಡಿದ್ದರು. ತಂದೆ ಆ ಭಾಗದಲ್ಲಿ ಉತ್ತಮ ಶಿಕ್ಷಕರೆಂದು ಹೆಸರು ಮಾಡಿದ್ದ ಜಿ.ಪಿ.ಗೋಪಾಲ ಕೃಷ್ಣ ಅಯ್ಯಂಗಾರ್ , ತಾಯಿಯ ಪ್ರೀತಿ ಇಲ್ಲದೆ ಬೆಳೆದ ರಾಜರತ್ನಂಗೆ,
ತಂದೆಯೇ ಎಲ್ಲವೂ ಆಗಿದ್ದರು. ಅಜ್ಜಿಯ ಅಕ್ಕರೆಯಲ್ಲೂ ರಾಜರತ್ನಂ ಬೆಳೆದರು. ತಂದೆ ಬಡ ಮೇಸ್ಟ್ರು. ಸ್ವಾತಂತ್ರ್ಯ ಪೂರ್ವದಲ್ಲೇ (೧೯೩೧ರಲ್ಲಿ) ರಾಜರತ್ನಂ ಎಂ. ಎ (ಕನ್ನಡ) ದಲ್ಲಿ ಮುಗಿಸಿ, ಶಿಶು ವಿಹಾರ ಹಾಗೂ ತಂದೆಯ ಶಾಲೆಯಲ್ಲಿ ಆರಂಭಿಕ ಮೇಸ್ಟ್ರು ಆದರು. ಇದರ ಅನುಭವದ ಫಲವೇ ಮಕ್ಕಳ ಕುರಿತು ಬರೆದ `ತುತ್ತೂರಿ' ಶಿಶು ಗೀತೆ ಸಂಕಲನ'. ಕ್ರಮೇಣ ಆ ಕೆಲಸ ತೃಪ್ತವಾಗದೆ ಹೈದರಾಬಾದಿಗೂ ಕೆಲಸ ಹುಡುಕಿ ಹೋಗಿದ್ದುಂಟು. ಅಲ್ಲಿಂದ ನಿರಾಶರಾಗಿ ಬೆಂಗಳೂರಿಗೆ ಬಂದು ಜನಗಣತಿ ಕಛೇರಿಯಲ್ಲಿ ಕೆಲಸಕ್ಕೆ ಪ್ರಯತ್ನಿಸಿದರು. ಆದರೆ ಅಲ್ಲಿದ್ದ ಮಾಸ್ತಿ ವೆಂಕಟೇಶ ಅಯ್ಯಂಗಾರ್ಯರು ರಾಜರತ್ನಂರವರಿಗೆ 'ಸಾಹಿತ್ಯ ಸೇವೆ' ಮುಂದುವರೆಸಲು ಉಪದೇಶಿಸಿದರು. ಅದರ ಫಲವೇ ಮುಂದೆ 'ರಾಜರತ್ನಂ' ಅವರಿಂದ 'ಉತ್ತಮ ಸಾಹಿತ್ಯ ನಿರ್ಮಾಣ'ಕ್ಕೆ ದಾರಿಯಾಯಿತು. ಬೌದ್ಧ ಸಾಹಿತ್ಯ ಇಂಥ ಉಪಯುಕ್ತ ಸಾಹಿತ್ಯದಲ್ಲೊಂದು 'ಮಿಂಚು'.
ಮಡದಿಯ ಸಾವಿನಿಂದ ಧೃತಿಗೆಟ್ಟರು

Sunday, August 3, 2014

ಯಶವಂತ ಚಿತ್ತಾಲರಿಗೆ ಹುಟ್ಟು ಹಬ್ಬದ ಶುಭಾಶಯಗಳು

ಜನನ: ಆಗಸ್ಟ್ 3, 1928, ನಿಧನ: ಮಾರ್ಚ್ 22, 2014
ಕನ್ನಡದ ಪ್ರತಿಭಾನ್ವಿತ, ಸೃಜನಶೀಲ ಗದ್ಯ ಲೇಖಕರಾದ ಯಶವಂತ ಚಿತ್ತಾಲರು ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಹನೇನಹಳ್ಳಿ. ತಂದೆ ವಿಠೋಬ, ತಾಯಿ ರುಕ್ಮಿಣಿ. (ಇವರ ಅಣ್ಣನೇ ಪ್ರಸಿದ್ಧ ಕವಿ ಗಂಗಾಧರ ಚಿತ್ತಾಲರು) ಪ್ರಾರಂಭಿಕ ವಿದ್ಯಾಭ್ಯಾಸ ಹನೇನಹಳ್ಳಿ, ಕುಮಟಾಗಳಲ್ಲಿ. ಉನ್ನತ ವಿದ್ಯಾಭ್ಯಾಸ ಧಾರವಾಡ ಮತ್ತು ಅಮೆರಿಕ. ೧೯೭೨ರಲ್ಲಿ ಅಮೆರಿಕದ ಸ್ಟೀವನ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅಧ್ಯಯನ ನಡೆಸಿ ರಾಸಾಯನಿಕ ತಂತ್ರಜ್ಞಾನದಲ್ಲಿ ಪಡೆದ ಸ್ನಾತಕೋತ್ತರ ಪದವಿ.

ಉದ್ಯೋಗಿಯಾಗಿ ಸೇರಿದ್ದು ಮುಂಬಯಿಯ ಬೇಕ್‌ಲೈಟ್ ಹೈಲ್ಯಾಮ್ ಲಿ. ಸಂಸ್ಥೆಯಲ್ಲಿ ಉನ್ನತ ಹುದ್ದೆಯಲ್ಲಿ ಸೇವೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಪ್ಲಾಸ್ಟಿಕ್ ಅಂಡ್ ರಬ್ಬರ್ ಸಂಸ್ಥೆಯಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ, ಮುಂಬಯಿಯ ಇಂಡಿಯನ್ ಪ್ಲಾಸ್ಟಿಕ್ ಮತ್ತು ಅಮೆರಿಕದ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ ಸಂಸ್ಥೆಯಲ್ಲಿ ನಡೆಸಿದ ಹಲವಾರು ಸಂಶೋಧನೆಗಳು.