Translate in your Language

Saturday, November 23, 2013

ಪಿ.ಶೇಷಾದ್ರಿ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು

P Sheshadri

ಶೇಷಾದ್ರಿ ಅವರು ಹುಟ್ಟಿದ್ದು ತುಮಕೂರು ಜಿಲ್ಲೆ ದಂಡಿನಶಿವರದಲ್ಲಿ 1963 ನವೆಂಬರ್ 23ರಂದು. 

ಇವರು ಈಗಾಗಲೇ ಏಳು ಚಿತ್ರಗಳನ್ನು ನಿರ್ದೇಶಿಸಿದ್ದು, ಈ ಏಳೂ ಚಿತ್ರಗಳೂ ರಾಷ್ಟ್ರಪ್ರಶಸ್ತಿ ಪಡೆದಿವೆ.

‘ಮುನ್ನುಡಿ' ಪಿ. ಶೇಷಾದ್ರಿ ಅವರು ನಿರ್ದೇಶಿಸಿದ ಮೊದಲ ಚಲನಚಿತ್ರ. 2000ದ ಇಸವಿಯಲ್ಲಿ ತೆರೆಗೆ ಬಂದ ಈ ಚಿತ್ರ ಕನ್ನಡ ಚಿತ್ರರಂಗದಲ್ಲಿ ಬಹು ಚರ್ಚಿತವಾದ ಚಿತ್ರ. ರಾಷ್ಟ್ರಮಟ್ಟದಲ್ಲಿ ಎರಡು, ರಾಜ್ಯಮಟ್ಟದಲ್ಲಿ ಆರು ಪ್ರಶಸ್ತಿಗಳನ್ನು ಪಡೆದು, ಹಲವಾರು ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶಿತವಾಯಿತು.

ಮರುವರ್ಷವೇ ಬಂದ ಪ್ರಕಾಶ್ ರೈ ಅಭಿನಯದ `ಅತಿಥಿ' ಮತ್ತೊಮ್ಮೆ ರಾಷ್ಟ್ರಪ್ರಶಸ್ತಿ ಪಡೆಯಿತು.

2004ರಲ್ಲಿ ಬಂದ `ಬೇರು' ಮೂರನೇ ರಾಷ್ಟ್ರಪ್ರಶಸಿ ಪಡೆದು, ಸತತ ಮೂರು ರಾಷ್ಟ್ರಪ್ರಶಸ್ತಿ ಪಡೆದ ನಿರ್ದೇಶಕ ಎಂಬ ಖ್ಯಾತಿಗೆ ಕಾರಣವಾಯಿತು. ನಂತರ 2005ರಲ್ಲಿ ತೆರೆಗೆ ಬಂದ ಜಯಮಾಲ ನಿರ್ಮಾಣದ `ತುತ್ತೂರಿ' ಮಕ್ಕಳ ಚಿತ್ರ ಕೂಡ ರಾಷ್ಟ್ರಪ್ರಶಸ್ತಿ ಪಡೆಯಿತಲ್ಲದೆ, ಜಪಾನ್ ದೇಶದ ಟೋಕಿಯೋ ಚಿತ್ರೋತ್ಸವದಲ್ಲಿ `ಅರ್ಥ್‌ವಿಷನ್ ಪ್ರಶಸ್ತಿ' ಪಡೆಯಿತು.

Thursday, November 21, 2013

ಕನ್ನಡದ ಮೊದಲ ಕಾದಂಬರಿ "ಮಾಡಿದ್ದುಣ್ಣೋ ಮಹರಾಯ" ಬರೆದ "ಎಮ್ ಎಸ್ ಪುಟ್ಟಣ್ಣ" ಅವರ ಹುಟ್ಟಿದ ದಿನದ ಸವಿ ನೆನಪಿನಲ್ಲಿ


ಎಂ. ಎಸ್. ಪುಟ್ಟಣ್ಣ ಕನ್ನಡದ ಮುನ್ನಡೆಗಾಗಿ ದುಡಿದ ಹಿರಿಯ ಮಹನೀಯರಲ್ಲಿ ಒಬ್ಬರು. ಅವರು ಜನಿಸಿದ್ದು ನವೆಂಬರ್ 21, 1854ರಲ್ಲಿ. ಚಿಕ್ಕಮಗುವಾಗಿರುವಾಗಲೇ ತಾಯಿ ತೀರಿಕೊಂಡರು. ತಂದೆ ಜಿಗುಪ್ಸೆಯಿಂದ ಕಾಶಿಗೆ ಹೋಗಿ ಸನ್ಯಾಸಿಯಾದವರು ಮಗನನ್ನು ನೋಡಲು ಬರಲೇ ಇಲ್ಲ. ಬಂಧುಗಳ ಆಶ್ರಯದಲ್ಲಿ ಬೆಳೆದರು. ಅವರ ನಿಜ ನಾಮಧೇಯ ಲಕ್ಷ್ಮೀನರಸಿಂಹ ಶಾಸ್ತ್ರಿ. ಎಲ್ಲರೂ ಮಗುವಾಗಿದ್ದಾಗ ಪುಟ್ಟಣ್ಣ ಎನ್ನುತ್ತಿದ್ದುದು ಹಾಗೇ ಉಳಿಯಿತು. ಸಂಪ್ರದಾಯ ಕುಟುಂಬದ ಹಿನ್ನಲೆಯಲ್ಲಿ ವಿದ್ಯಾಬ್ಯಾಸದ ಪ್ರಾರಂಭ ಪಂತರ ಖಾಸಗಿ ಮಠಗಳಲ್ಲಿ ನಡೆಯಿತು. ಅನಂತರ ರಾಜಾ ಸ್ಕೂಲಿನಲ್ಲಿ (ಇಂದಿನದ ಮಹಾರಾಜಾ ಕಾಲೇಜು) ಎಫ್. ಎ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಕೋಲಾರದ ಪ್ರೌಢಶಾಲೆಯಲ್ಲಿ ಸಹೋಧ್ಯಾಪಕರಾಗಿ ನೇಮಕಗೊಂಡರು. ವೃತ್ತಿಯೊಂದಿಗೆ ಅಧ್ಯಯನಕ್ಕೂ ಮನಸ್ಸು ಕೊಟ್ಟು ಮದರಾಸಿನಲ್ಲಿ ಬಿ.ಎ. ಪದವಿ ಪಡೆದರು. ಮುಂದೆ ಅಧ್ಯಾಪಕ ಪದವಿ ಬಿಟ್ಟು ಬೆಂಗಳೂರಿನ ಚೀಫ್ ಕೋರ್ಟಿನಲ್ಲಿ (ಈಗಿನ ಹೈಕೋರ್ಟಿನಲ್ಲಿ) ಭಾಷಾಂತರಕಾರರಾಗಿ ದುಡಿದರು. 1897ರಲ್ಲಿ ಅವರನ್ನು ಚಿತ್ರದುರ್ಗದ ಅಮಲ್ದಾರನ್ನಾಗಿ ನೇಮಿಸಲಾಯಿತು. ಮುಂದೆ ರಾಜ್ಯದ ಹಲವೆಡೆಗಳಲ್ಲಿ ಅಮಲ್ದಾರರಾಗಿ ಸೇವೆ ಸಲ್ಲಿಸಿದರು. ಬೆಂಗಳೂರಿನ ತೆರೆಗೆದಾರರ ಸಂಘಟಕರಾಗಿದ್ದ ಅವರು ಆ ದಿನಗಳಲ್ಲಿಯೇ ದಾಖಲೆಗಳನ್ನು ಕನ್ನಡದಲ್ಲಿ ಮೂಡಿಸಲು ಕಾರಣರಾದರು.

Monday, November 11, 2013

"ರಘು ದೀಕ್ಷಿತ್" ಎಂಬ ಅಪ್ರತಿಮ ಗಾಯಕನಿಗೆ ಹುಟ್ಟುಹಬ್ಬದ ಶುಭಾಶಯಗಳು

ಮೈಸೂರಿನಲ್ಲಿ ಹುಟ್ಟಿ ಬೆಳೆದ ಈ ಅದ್ಭುತ ಸಂಗೀತ ಮಾಂತ್ರಿಕ ಹುಟ್ಟಿದ್ದು ನವೆಂಬರ್ 11, 1974 ರಲ್ಲಿ
"ನಿನ್ನಾ ಪೂಜೆಗೆ ಬಂದೇ ಮಾದೇಶ್ವರಾ," ಎಂಬ ಹಾಡಿನಿಂದ ಕನ್ನಡಿಗರಿಗೆ ಪರಿಚಿತವಾದ ಕಂಚಿನ ಕಂಠದ "ರಘು ದೀಕ್ಷಿತ್" ಎಂಬ  ಅಚ್ಚ ಕನ್ನಡ ಪ್ರತಿಭೆ ನಮ್ಮ ರಾಜ್ಯ/ದೇಶದ ಗಡಿಗಳನ್ನು ದಾಟಿ ಈಗ ಅಂತರರಾಷ್ಟೀಯ ಮಟ್ಟದಲ್ಲಿ ತನ್ನ ಪ್ರತಿಭೆಯನ್ನು ತೋರಿಸಲು ಹೊರಟಿದ್ದಾರೆ. ಅವರು ಅನೇಕ ದೇಶಗಳಲ್ಲಿ ಈಗಾಗಲೇ ನಮ್ಮ ಕನ್ನಡದ "ಶಿಶುನಾಳ ಷರೀಫ"ರ ಹಾಡುಗಳನ್ನು ಪಾಶ್ಚಿಮಾತ್ಯ ಸಂಗೀತದ ಧಾಟಿಯಲ್ಲಿ ಪ್ರಚಾರ ಪಡಿಸಿದ್ದಾರೆ.

Thursday, October 17, 2013

ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ 44ನೇ ಹುಟ್ಟು ಹಬ್ಬದ ಶುಭಾಶಯಗಳು

ನಮ್ಮ, ಕುಂಬ್ಳೆ ಅವರು ಹುಟ್ಟಿದ ದಿನ ಅಕ್ಟೋಬರ್ 17, 1970. ಕುಂಬ್ಳೆ ಎಂದರೆ ಅದೆಂತದ್ದೋ ರೋಮಾಂಚನ. ಬಾಲ್ ಹಿಡಿದು ಜಿಂಕೆಯಂತೆ ಚಿಮ್ಮುವ ಅವರ ಬೌಲಿಂಗ್ ವೈಖರಿಯನ್ನು ನೋಡುವುದೇ ಒಂದು ಸೊಗಸು. ಬ್ಯಾಟಿಂಗ್ನಲ್ಲಿ ಕೂಡ ಭಾರತದ ಏಳು ವಿಕೆಟ್ ಪತನವಾಗಿದ್ದರೂ, ಇನ್ನೂ ಕುಂಬ್ಳೆ ಇದ್ದಾರೆ ನೋಡೋಣ ಇರಿ, ಎಂಬಷ್ಟು ಭರವಸೆ ಹುಟ್ಟಿಸುತ್ತಿದ್ದ ಆಟಗಾರ. ಒಂದೆರಡು ವರ್ಷದ ಹಿಂದೆ, ಭಾರತ ವಿಶ್ವ ಟೆಸ್ಟ್ ಕ್ರಿಕೆಟ್ನಲ್ಲಿ ಮೊದಲ ಸ್ಥಾನದಲ್ಲಿ ಅಲಂಕೃತವಾಗಿತ್ತು ಎಂದರೆ, ಕುಂಬ್ಳೆ ಅಂತಹ ಬೌಲರ್ ಕಳೆದ ಎರಡು ದಶಕಗಳಲ್ಲಿ ನೀಡಿದ ಅಮೋಘ ಕೊಡುಗೆ ಕೂಡ ಅದಕ್ಕೆ ಉತ್ತಮ ಬುನಾದಿ ಹಾಕಿದೆ ಎಂಬುದು ಎಲ್ಲ ಕ್ರೀಡಾಭಿಮಾನಿಗಳೂ ಒಪ್ಪುವ ವಿಷಯ. ಇತ್ತೀಚಿನ ವರ್ಷದಲ್ಲಿ ವಿದೇಶದಲ್ಲಿ ನಡೆದ ಟೆಸ್ಟ್ ಸರಣಿಗಳಲ್ಲಿ ಸೋತು ಸುಣ್ಣವಾದ ಬಾರತ ತಂಡ, ಕುಂಬ್ಳೆ ಅಂಥಹ ಬೌಲರ್ ನಮ್ಮಲ್ಲಿ ಇಲ್ಲದಿದ್ದರೆ ಏನಾಗುತ್ತದೆ ಎಂಬುದನ್ನು ನಿರೂಪಿಸಿದ ನೈಜ ಸ್ಥಿತಿ ಕೂಡಾ ಹೌದು. 

ಅಂದಿನ ದಿನದಲ್ಲಿ ಭಾರತದ ಪ್ರಮುಖ ಸ್ಪಿನ್ನರುಗಳೆಲ್ಲ ನಿವೃತ್ತಿ ಹೊಂದಿದಾಗ, ಅಂದಿನ ದಿನದಲ್ಲಿ ಆಯ್ಕೆದಾರರಾದ ರಾಜ್ ಸಿಂಗ್ ದುರ್ಗಾಪುರ್ ಅವರು ಆಶ್ಚರ್ಯವೋ ಎಂಬಂತೆ ಅನಿಲ್ ಕುಂಬ್ಳೆ ಅವರನ್ನು ಶ್ರೀಲಂಕಾ ವಿರುದ್ಧದ ಏಕ ದಿನ ಪಂದ್ಯ ಮತ್ತು ಇಂಗ್ಲೆಂಡ್ ಪ್ರವಾಸದ ಟೆಸ್ಟ್ ತಂಡಕ್ಕೆ ಹೆಸರಿಸಿದ್ದರು. ಅಂದಿನ ಆ ಆಯ್ಕೆಯನ್ನು ಅತ್ಯಂತ ಸಮರ್ಥವಾಗಿ ಕಾಯ್ದುಕೊಂಡು ಬಂದ ಕುಂಬ್ಳೆ ಅವರು, ನಂತರ ತಾವಾಗಿಯೇ ಮೂರು ವರ್ಷದ ಹಿಂದೆ ನಿವೃತ್ತಿ ಘೋಷಿಸುವವರೆಗೆ ಹಿಂದಿರುಗಿ ನೋಡಿದ್ದೇ ಇಲ್ಲ. ಮೊದಲ ಸುತ್ತಿನಲ್ಲಿ ಸೋತು ಸುಣ್ಣವಾಗಿದ್ದ ಬೆಂಗಳೂರಿನ ರಾಯಲ್ ಚಾಲೆಂಜರ್ಸ್ ತಂಡವನ್ನು ತಮ್ಮ ಸತ್ವಶಾಲಿ ನಾಯಕತ್ವ ಮತ್ತು ಬೌಲಿಂಗ್ನಿಂದ ಎರಡನೇ ಸುತ್ತಿನ ಪಂದ್ಯಗಳಲ್ಲಿ ಫೈನಲ್ ವರೆಗೆ ತಂದು ಪ್ರತಿಷ್ಟಿತ ತಂಡವನ್ನಾಗಿ ಮುನ್ನಡೆಸಿದವರು ಕೂಡಾ ಕುಂಬ್ಳೆ ಅವರೇ. ಮುಂದೆ ರಾಯಲ್ ಚಾಲೆಂಜರ್ಸ್ ತಂಡಕ್ಕೆ ಕುಂಬ್ಳೆ ಮಾರ್ಗದರ್ಶಕರಾಗಿದ್ದ ಕುಂಬ್ಳೆ ಇತ್ತೀಚಿನ ಐಪಿಎಲ್ ಮತ್ತು ಚಾಲೆಂಜರ್ಸ್ ಟ್ರೋಫಿ ಪಂದ್ಯಾವಳಿಗಳನ್ನು ಗೆದ್ದ ಮುಂಬೈ ಇಂಡಿಯನ್ಸ್ ತಂಡದ ಮಾರ್ಗದರ್ಶಕರಲ್ಲೊಬ್ಬರಾಗಿದ್ದಾರೆ.

Monday, October 7, 2013

ಬಂಗಾರದ ಮನುಷ್ಯ ಕಾದಂಬರಿ ಬರೆದ ಟಿ. ಕೆ. ರಾಮರಾವ್ ಅವರ ಹುಟ್ಟು ಹಬ್ಬದ ಸವಿ ನೆನಪಿನಲ್ಲಿ

ಟಿ.ಕೆ.ರಾಮರಾವ್ ೧೯೩೧ ಅಕ್ಟೋಬರ ೭ರಂದು ಜನಿಸಿದರು. ಇವರ ತಾಯಿ ನಾಗಮ್ಮ;ತಂದೆ ಕೃಷ್ಣಮೂರ್ತಿ.ಇವರು ಕನ್ನಡದ
T K Ramarao
ಪತ್ತೇದಾರಿ ಕಾದಂಬರಿಕಾರರಲ್ಲಿ ಪ್ರಮುಖರಾದವರು. ಪತ್ತೆದಾರಿ ಕಾದಂಬರಿಗಳಲ್ಲದೆ, ಸಾಮಾಜಿಕ ಕಾದಂಬರಿ, ಸಣ್ಣಕತೆಗಳನ್ನೂ ಬರೆದಿದ್ದಾರೆ.

ಕಾದಂಬರಿಗಳು
ಬಂಗಾರದ ಮನುಷ್ಯ
ಸೇಡಿನ ಹಕ್ಕಿ
ಮರಳು ಸರಪಣಿ
ಪಶ್ಚಿಮದ ಬೆಟ್ಟ
ಲಂಗರು
ಡೊಂಕು ಮರ
ಕೋವಿ-ಕುಂಚ
ಆಕಾಶ ದೀಪ
ಸೀಳು ನಕ್ಷತ್ರ
ಕೆಂಪು ಮಣ್ಣು
ಸೀಮಾ ರೇಖೆ
ದಿಬ್ಬದ ಬಂಗಲೆ

Wednesday, September 18, 2013

ಡಾ.ವಿಷ್ಣುವರ್ಧನ್ ಅವರ 64ನೇ ಹುಟ್ಟುಹಬ್ಬದ ಸವಿ ನೆನಪಿನಲ್ಲಿ

Dr. Vishnuvardhan
ಡಾ.ವಿಷ್ಣುವರ್ಧನ್ (ಜನನ: ಸೆಪ್ಟೆಂಬರ್ 18, 1950 | ಮರಣ :ಡಿಸೆಂಬರ್ 30, 2009) ಕನ್ನಡ ಚಿತ್ರರಂಗದ ಪ್ರಸಿದ್ಧ ನಟರಲ್ಲಿ ಒಬ್ಬರು.ಸಂಪತ್ ಕುಮಾರ್ ಎಂಬುದು ಇವರ ಮೂಲ ಹೆಸರು. ಸಾಹಸಸಿಂಹ ಎಂಬ ಬಿರುದು ಪಡೆದ ಡಾ.ವಿಷ್ಣುವರ್ಧನ್ ಇದುವರೆಗೆ ಒಟ್ಟು ಸುಮಾರು ೨೦೦ ಚಿತ್ರಗಳಲ್ಲಿ ನಟಿಸಿದ್ದಾರೆ. ಇವರ ವೊದಲ ಚಿತ್ರ ಎಸ್ ಎಲ್ ಭೈರಪ್ಪನವರ ಕಾದಂಬರಿಯಾಧಾರಿತ ವಂಶವೃಕ್ಷ. ಇದರಲ್ಲಿ ಸಣ್ಣ ಪಾತ್ರ ವಹಿಸಿದ್ದರು.


ನಾಯಕನ ಪಾತ್ರದಲ್ಲಿ ಇವರ ಮೊದಲ ಚಿತ್ರ ೧೯೭೨ ರಲ್ಲಿ ಬಿಡುಗಡೆಯಾದ ಪುಟ್ಟಣ್ಣ ಕಣಗಾಲ್ ನಿರ್ದೇಶನದ ನಾಗರಹಾವು. ಬೆಂಗಳೂರು ವಿಶ್ವವಿದ್ಯಾಲಯವು ೨೦೦೫ನೇ ವರ್ಷದಲ್ಲಿ ಇವರಿಗೆ ಗೌರವ ಡಾಕ್ಟರೇಟ್ ಪದವಿಯನ್ನಿತ್ತು ಗೌರವಿಸಿದೆ. ನಟನೆಯಲ್ಲದೇ, ಕಿಲಾಡಿ ಕಿಟ್ಟು, ನಾಗ ಕಾಳ ಭೈರವ, ಸಾಹಸಸಿಂಹ , ಜಿಮ್ಮಿಗಲ್ಲು, ಖೈದಿ ಮೋಜುಗಾರ ಸೊಗಸುಗಾರ, ವಿಷ್ಣುಸೇನಾ ಇವೇ ಮೊದಲಾದ ಕೆಲವು ಚಿತ್ರಗಳಲ್ಲಿ ಹಿನ್ನೆಲೆ ಗಾಯನವನ್ನೂ ಕೂಡ ಮಾಡಿದ್ದಾರೆ, ವಿಷ್ಣುವರ್ಧನ್ -ಸುಹಾಸಿನಿ, ವಿಷ್ಣುವರ್ಧನ್-ಮಾಧವಿ ಜೋಡಿ ಕನ್ನಡ ಚಿತ್ರರಂಗದ ಅಪೂರ್ವ ಜೋಡಿಯೆಂದು ಹೆಸರಾಗಿದೆ. ಹಾಗೆಯೇ ವಿಷ್ಣು ಅವರ ಹೆಚ್ಚಿನ ಚಿತ್ರದಲ್ಲಿ ನಟಿಸಿದ ಕೀರ್ತಿ ನಟಿ ಆರತಿಗೆ ಅವರಿಗೆ ಸಲ್ಲುತ್ತದೆ.



ಬಂನ್ನಂಜೆ ಗೋವಿಂದಾಚಾರ್ಯಾರು ಇವರ ಆದ್ಯಾತ್ಮಿಕ ಗುರುವಾಗಿದ್ದರು, ಸಂಖ್ಯಾಭವಿಷ್ಯಶಾಸ್ತ್ರವನ್ನು ನಂಬುತ್ತಿದ್ದ ಇವರು ತಮ್ಮ ಕಾರಿನ ನಂಬರಾಗಿ ಮತ್ತು ಮೊಬೈಲ್ ನ ಕೊನೆಯ ಸಂಖ್ಯೆಯಾಗಿ "೩೨೧" ಬಳಸುತ್ತಿದ್ದರು.

Sunday, September 1, 2013

ತ್ರಿವೇಣಿ ಅವರ ಹುಟ್ಟು ಹಬ್ಬದ ನೆನಪಿನಲ್ಲಿ

Triveni
ತ್ರಿವೇಣಿಯವರು ಕನ್ನಡದ ನವೋದಯದ ಮಾರ್ಗದಲ್ಲಿ ಬರೆಯಲು ಪ್ರಾರಂಭಿಸಿದ ಪ್ರಮುಖ ಕಾದಂಬರಿಕಾರರು. ಅವರು ತಮ್ಮ ಕಥೆ ಕಾದಂಬರಿಗಳ ಮೂಲಕ ಪ್ರಗತಿಪರ ಧೋರಣೆಯನ್ನು ಪ್ರತಿಪಾದಿಸಿದ ಬರಹಗಾರ್ತಿಯರಲ್ಲಿ ಪ್ರಮುಖರು.  ಸುಮಾರು ಒಂದು ದಶಕದ ಅವಧಿಯಲ್ಲಿ ರಚಿತವಾದ ಅವರ ಕಥೆ-ಕಾದಂಬರಿಗಳು ಕನ್ನಡದಲ್ಲಿ ಓದುಗರ ಒಂದು ವರ್ಗವನ್ನೇ ಸೃಷ್ಟಿಸಿತು. 

ಬಿ. ಎಂ. ಶ್ರೀ ಅವರ ತಮ್ಮ ಬಿ. ಎಂ. ಕೃಷ್ಣಸ್ವಾಮಿಯವರ ಎರಡನೆಯ ಮಗಳಾದ ತ್ರಿವೇಣಿ ಅವರು ಜನಿಸಿದ್ದು ಸೆಪ್ಟೆಂಬರ್ 1, 1928ರಲ್ಲಿ.  ಅವರ ಹುಟ್ಟು ಹೆಸರು ಭಾಗೀರಥಿ.  ಅವರು ಶಾಲೆಗೆ ಸೇರಿದಾಗ ಅವರ ಹೆಸರು ‘ಅನಸೂಯ’ ಎಂದಾಯಿತು.   ಕಾಲೇಜು ಶಿಕ್ಷಣ ಮೈಸೂರಿನಲ್ಲಿ ಆಯಿತು. 1947ರಲ್ಲಿ ಮಹಾರಾಜಾ ಕಾಲೇಜಿನಿಂದ ಮನ:ಶಾಸ್ತ್ರದಲ್ಲಿ ಚಿನ್ನದ ಪದಕದೊಂದಿಗೆ ಬಿ.ಎ.ಪದವಿ ಪಡೆದರು.   ಅಂದಿನ ದಿನಗಳಲ್ಲಿ ನಮಗೆ ಶಾರದಾ ವಿಲಾಸ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಶ್ರೀ ಶಂಕರ್ ಅವರ ಪತಿ.  ಮದುವೆಯ ನಂತರ ‘ಅನಸೂಯ ಶಂಕರ್’ ಆದರು.  ಮನೆಯೊಳಗಿನ ಅನಸೂಯ ಶಂಕರ್ ಸಣ್ಣಕಥೆಗಳ ಮೂಲಕ ಕನ್ನಡ ಸಾಹಿತ್ಯ ರಂಗವನ್ನು ಪ್ರವೇಶಿಸಿ ಕಾದಂಬರಗಾರ್ತಿಯಾಗಿ ‘ತ್ರಿವೇಣಿ’ ಎಂಬ ಕಾವ್ಯನಾಮದಿಂದ ಪ್ರಖ್ಯಾತರಾದರು.

 ‘ಶರಪಂಜರ, ‘ಬೆಳ್ಳಿಮೋಡ’, ‘ಕೀಲುಗೊಂಬೆ, ‘ಹೃದಯ ಗೀತೆ, ‘ಬೆಕ್ಕಿನಕಣ್ಣು’, ‘ಬಾನುಬೆಳಗಿತು, ‘ಅವಳ ಮನೆ’, ‘ಕಾಶೀಯಾತ್ರೆ, ‘ಹಣ್ಣೆಲೆ ಚಿಗುರಿದಾಗ’, ‘ಹೂವು ಹಣ್ಣು’,  ‘ಮುಕ್ತಿ’,  ‘ದೂರದ ಬೆಟ್ಟ’,  ‘ಅಪಸ್ವರ’, ‘ಅಪಜಯ’, ‘ತಾವರೆ ಕೊಳ’, ‘ಸೋತು ಗೆದ್ದವಳು’, ‘ಕಂಕಣ’, ‘ಮುಚ್ಚಿದ ಬಾಗಿಲು’, ‘ಮೊದಲ ಹೆಜ್ಜೆ’, ‘ವಸಂತಗಾನ’, ‘ಅವಳ ಮಗಳು’ ಇವು ತ್ರಿವೇಣಿಯವರ  ಕಾದಂಬರಿಗಳಾಗಿವೆ.